Monday, June 20, 2011

ಅಂಧರ ಬಾಳಿಗೆ ಬೆಳಕಾಗಬಲ್ಲ ‘ಸ್ಟೆಮ್ ಸೆಲ್‘ ತೆರಪಿ

Dear all, Here I am posting a reproduced article bassed on an article in a popular site. This article explains about the use of stem cells for treating various retinal diseases.

----------------------------------------------
ಸ್ಟೆಮ್ ಸೆಲ್ (Stem Cell) ಅನ್ನು ಬಳಸಿ ವಂಶವಾಹಿಗಳಿಂದ ಅನುವಂಶೀಯವಾಗಿ ಬರುವ ಒಂದು ಬಗೆಯ ಅಂಧತ್ವವನ್ನು ಸರಿಪಡಿಸುವಲ್ಲಿ ಸಂಶೋಧಕರು ಯಶಸ್ವಿಯಾಗಿದ್ದಾರೆ. ಈ ಸಂಶೋಧನೆಯ್ಯು ಅಕ್ಷಿಪಟಲ (Retina) ಸಂಬಂದಿ ಕಾಯಿಲೆಗಳಿಗೆ ಮುಂದಿನ ದಿನಗಳಲ್ಲಿ ಒಂದು ಶಾಶ್ವತ ಚಿಕಿತ್ಸೆಯನ್ನು ನೀಡುವ ಭರವಸೆಯನ್ನು ಮೂಡಿಸಿದೆ. ಮ್ಯಾಕ್ಯುಲಾರ್ ಡಿಜನರೇಶನ್ (Macular degeneration), ರೆಟಿನೈಟಿಸ್ ಪಿಗ್‌ಮೆಂಟೋಸ (Retinitis pigmentosa) ಇಂತಹ ಖಾಯಿಲೆಗಳಿಗೆ ಲಕ್ಷಾಂತರ ಮಂದಿ ಬಲಿಯಾಗಿ ಕುರುಡರಾಗುತ್ತಿದ್ದಾರೆ. ಇಂಥವರ ಜೀವನದಲ್ಲಿ ಮತ್ತೆ ಬೆಳಕು ಮೂಡುವ ಆಶಯವನ್ನು ಈ ಸಂಶೋಧನೆ ಮೂಡಿಸಿದೆ.

ಸ್ಟೆಮ್‌ಸೆಲ್ ಸಂಶೋಧನೆಗಳ ಕುರಿತಾಗಿರುವ ಒಂದು ಪ್ರತಿಷ್ಠಿತ ಆನ್‌ಲೈನ್ ಜರ್‌ನಲ್‌ನಲ್ಲಿ ಈ ಕುರಿತ ಸಂಶೋಧನೆಯ ವಿವರಗಳು ಜೂನ್ ೧೫ ರಂದು ಪ್ರಕಟಗೊಂಡಿವೆ. ಈ ಸಂಶೋಧನೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ತಯಾರಿಸಿದ ಇಂಡ್ಯೂಸ್ಡ್ ಪ್ಲ್ಯೂರಿಪೊಟೆಂಟ್ ಸ್ಟೆಮ್ (induced pluripotent stem) (iPS) ಸೆಲ್‌ಗಳನ್ನು ಬಳಸಿ ಒಂದು ವಿರಳ ಅನುವಂಶೀಯ ಖಾಯಿಲೆಯಾದ ಜೆಯ್‌ರೇಟ್ ಆಟ್ರಫಿ (gyrate atrophy) ಅನ್ನು ಗುಣಪಡಿಸಲಾಗಿದೆ. ಈ ಕಾಯಿಲೆಯು ‘ರೆಟಿನಲ್ ಪಿಗ್‌ಮೆಂಟ್ ಎಪಿಥೀಲಿಯಮ್‘ (retinal pigment epithelium) (RPE) ಸೆಲ್‌ಗಳನ್ನು ನಾಶ ಪಡಿಸಿ ಅಂಧತ್ವವನ್ನುಂಟು ಮಾಡುತ್ತದೆ. ಇವುಗಳು ರೆಟಿನಾದಲ್ಲಿನ ‘ಫೋಟೋ ರಿಸೆಪ್ಟಾರ್‘ ಸೆಲ್‌ಗಳ ಕಾರ್ಯನಿರ್ವಹಣೆಯಲ್ಲಿ ತುಂಬಾ ಮಹತ್ವದ ಪಾತ್ರ ವಹಿಸುತ್ತವೆ. ಈ ಫೋಟೋ ರಿಸೆಪ್ಟಾರ್ ಸೆಲ್‌ಗಳು ರೆಟಿನಾದ ಮೇಲೆ ಬಿದ್ದ ಬೆಳಕನ್ನು ಸಂಕೇತ ರೂಪಕ್ಕೆ ಪರಿವರ್ತಿಸಿ ಮೆದುಳಿಗೆ ಕಳಿಸುವಲ್ಲಿ ನೆರವಾಗುತ್ತವೆ. ಈ ಸಂಕೇತಗಳನ್ನು ಮೆದುಳು ಗ್ರಹಿಸಿ ಅವುಗಳನ್ನು ಅರ್ಥೈಸಿಕೊಳ್ಳುತ್ತದೆ. ಆದರೆ ‘ರೆಟಿನಲ್ ಪಿಗ್‌ಮೆಂಟ್ ಎಪಿಥೀಲಿಯಮ್‘ ಸೆಲ್‌ಗಳ ತೊಂದರೆಯಿಂದಾಗಿ ಫೋಟೋ ರಿಸೆಪ್ಟಾರ್ ಸೆಲ್‌ಗಳು ಸರಿಯಾಗಿ ಕೆಲಸ ಮಾಡದೇ ಕುರುಡತ್ವ ಉಂಟಾಗುತ್ತದೆ. ಹಾಳಾದ ‘ರೆಟಿನಲ್ ಪಿಗ್‌ಮೆಂಟ್ ಎಪಿಥೀಲಿಯಮ್‘ ಸೆಲ್‌ಗಳನ್ನು ಪುನರ್‌ನಿರ್ಮಾಣ ಮಾಡುವುದರಿಂದ ಈ ಕಾಯಿಲೆಯಿಂದಾಗಿ ಅಂಧನಾದ ವ್ಯಕ್ತಿಯ ಜೀವನದಲ್ಲಿ ಮತ್ತೆ ಬೆಳಕು ಮೂಡಿಸಬಹುದು.

"ನಾವು ಇಂಡ್ಯೂಸ್ಡ್ ಪ್ಲ್ಯೂರಿಪೊಟೆಂಟ್ ಸ್ಟೆಮ್ ಸೆಲ್‌ಗಳನ್ನು ತಯಾರಿಸಿ, ಈ ಕಾಯಿಲೆಗೆ ಕಾರಣವಾದ ಒಂದು ಬಗೆಯ ವಂಶವಾಹಿ ತೊಂದರೆಯನ್ನು ಸರಿಪಡಿಸಿ, ಈ ಇಂಡ್ಯೂಸ್‌ಡ್ ಪ್ಲ್ಯೂರಿಪೊಟೆಂಟ್ ಸ್ಟೆಮ್‘ ಸೆಲ್‌ಗಳು ರೆಟಿನಲ್ ಪಿಗ್‌ಮೆಂಟ್ ಎಪಿಥೀಲಿಯಮ್‘ ಸೆಲ್‌ಗಳಾಗಿ ಬೆಳೆಯುವಂತೆ ಮಾಡಿದಾಗ ಈ ಸೆಲ್‌ಗಳು ಸ್ವಾಬಾವಿಕವಾಗಿ ಕಾರ್ಯನಿರ್ವಹಿಸಿದವು. ಈ ಫಲಿತಾಂಶವು ತುಂಬಾ ಉತ್ತೇಜನಕಾರಿಯಾದುದು ಯಾಕೆಂದರೆ ಸರಿಯಾಗಿಲ್ಲದ ಒಂದು ಸಂಕೀರ್ಣ ವ್ಯವಸ್ಥೆಯನ್ನೂ ಸಹ ನಾವು ಸರಿಪಡಿಸಬಹುದು, ಅಲ್ಲದೇ ಭವಿಷ್ಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಥವಾ ನಿಶ್ಪ್ರಯೋಜಕವಾಗಿರುವ ರೆಟಿನಾದ ಸೆಲ್‌ಗಳನ್ನೂ ಈ ಚಿಕಿತ್ಸೆಯಿಂದ ಸರಿಪಡಿಸಬಹುದು" ಎಂದು ಅಧ್ಯಯನದ ನೇತೃತ್ವ ವಹಿಸಿರುವ ಕೋಷ ಜೀವಶಾಸ್ತ್ರಜ್ಞ ಹಾಗು ಇಂಡ್ಯಾನ ವಿಶ್ವವಿದ್ಯಾನಿಲಯದ ‘ಸ್ಕೂಲ್ ಆಫ್ ಸೈನ್ಸ್‘ ನ ಜೀವಶಾಸ್ತ್ರದ ಸಹಾಯಕ ಪ್ರೊಫೆಸರ್ ಡಾ|| ಜೇಸನ್ ಮೇಯರ್ ತಿಳಿಸಿದರು.

ಮ್ಯಾಕ್ಯುಲಾರ್ ಡಿಜನರೇಶನ್ ಒಂದು ಸಾಮಾನ್ಯ ಕಣ್ಣಿನ ಕಾಯಿಲೆಯಾಗಿದ್ದು ವಿಶ್ವದಲ್ಲಿನ ಸುಮಾರು ೨೫-೩೦ ಮಿಲಿಯನ್ ಜನರು ಈ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಸುಮಾರು ೧.೫ ಮಿಲಿಯನ್ ಜನರು ರೆಟಿನೈಟಿಸ್ ಪಿಗ್‌ಮೆಂಟೋಸ ರೋಗದಿಂದ ಬಳಲುತ್ತಿದ್ದಾರೆ.

ಈ ಇಂಡ್ಯೂಸ್ಡ್ ಪ್ಲ್ಯೂರಿಪೊಟೆಂಟ್ ಸ್ಟೆಮ್‘ ಸೆಲ್‌ಗಳನ್ನು ಅದೇ ರೋಗಿಗಳಿಂದ ಪಡೆದುಕೊಳ್ಳುವುದರಿಂದಾಗಿ ಮುಂದೆ ಯಾವುದೇ ‘ಟ್ರಾನ್ಸ್‌ಪ್ಲಾಂಟ್ ರಿಜಕ್ಷನ್‘ ಅಂತಹ ಸಮಸ್ಯೆಗಳು ತಲೆದೋರುವುದಿಲ್ಲ.

ಒಟ್ಟಿನಲ್ಲಿ ಹೇಳುವುದಾದರೆ ವಿಜ್ಞಾನದ ಇಂತಹ ಅವಿಷ್ಕಾರಗಳು ಮನುಕುಲದ ಅನೇಕ ಸಮಸ್ಯೆಗಳನ್ನು ಬಹುಮಟ್ಟಿಗೆ ನಿವಾರಿಸುವಲ್ಲಿ ಮಹತ್ವದ ಕೊಡುಗೆ ನೀಡುತ್ತಿವೆ. ಇನ್ನೂ ಹೆಚ್ಚು ಹೆಚ್ಚು ಇಂತಹ ಸಂಶೋಧನೆಗಳು ನಡೆದು ಬೆಳಕನ್ನೇ ಕಾಣದವರ ಬಾಳನ್ನು ಬೆಳಗಲಿ ಎಂದು ಆಶಿಸೋಣ ಅಲ್ಲವೇ?

ಕೃಪೆ: ಸೈನ್ಸ್‌ಡೇಲಿ

Sunday, June 12, 2011

ಬಾಬಾ ರಾಮದೇವ್ ಕುರಿತು ದಿಗ್ವಿಜಯ್ ಕುಹಕ

ನಮಸ್ಕಾರ, ತುಂಬಾ ದಿನಗಳ ನಂತರ ಮತ್ತೆ ಬರೆಯುತ್ತಿದ್ದೇನೆ. ಜೂನ್ ೪ ರಂದು ದಟ್ಶ್‌ಕನ್ನಡದಲ್ಲಿ ಪ್ರಖಟವಾದ ನನ್ನ ಲೇಖನವನ್ನು ತುಸು ತಡವಾಗಿ ಇಲ್ಲಿಊ ಪ್ರಖಟಿಸುತ್ತಿದ್ದೇನೆ.

Hi, In this Article, I expressed my anger slightly regarding remarks made by Digvijay Singh about Baba Ramdev.

ಬಾಬಾ ರಾಮದೇವ್‌ಗೆ ಹೆದ್ರಲ್ಲ, ಅವರು ಸನ್ಯಾಸಿಯೇ ಅಲ್ಲ: ದಿಗ್ವಿಜಯ್  
ಕಪ್ಪು ಹಣದ ವಿರುದ್ಧ ಸಮರ ಸಾರಿರುವ ಬಾಬಾ ರಾಮದೇವ್ ಅವರು ಸನ್ಯಾಸಿಯೇ ಅಲ್ಲ, ಅವರೊಬ್ಬ ಉದ್ಯಮಿ ಎಂದು ಟೀಕಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ, ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್, ಅವರ ಉಪವಾಸಕ್ಕೇನೂ ನಾವು ಹೆದರುವುದಿಲ್ಲ ಎಂದಿದ್ದಾರೆ.
"ಉಪವಾಸ ಸತ್ಯಾಗ್ರಹಗಳಿಂದ ಭ್ರಷ್ಟಾಚಾರ ನಿಯಂತ್ರಣ ಸಾಧ್ಯವಿಲ್ಲ. ಕಾನೂನಿನಿಂದ ಮಾತ್ರ ಇದು ಸಾಧ್ಯ" ಎಂದು ಉಪವಾಸ ಸತ್ಯಾಗ್ರದ ಪಿತಾಮಹ ಎಂದೇ ಲೋಕದೆಲ್ಲೆಡೆ ಪ್ರಸಿದ್ಧವಾಗಿರುವ ಮಹಾತ್ಮ ಗಾಂಧೀಜಿಯವರಿದ್ದ ಕಾಂಗ್ರೆಸ್ ಪಕ್ಷದ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯವಾಡಿದ್ದಾರೆ.
ನಾವೇನಾದರೂ ಬಾಬಾ ಅವರಿಗೆ ಹೆದರಿದ್ದಿದ್ದರೆ, ಪಕ್ಷವು ಅವರನ್ನೇ ಕಂಬಿಗಳ ಹಿಂದೆ ತಳ್ಳಿ ಬಿಡುತ್ತಿತ್ತು. ಬಾಬಾ ಈಗ ಉದ್ಯಮಿಯೇ ಆಗಿದ್ದು, ಬಾಬಾ ರಾಮದೇವ್ ಅವರು ಯೋಗ ಶಿಬಿರವೊಂದಕ್ಕೆ 50 ಸಾವಿರ ರೂಪಾಯಿ ಶುಲ್ಕ ವಿಧಿಸುತ್ತಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಅಲ್ಲಾ ಸ್ವಾಮಿ, ದಿಗ್ವಿಜಯ್ ಸಿಂಗ್‌ಅವರೇ, ಉದ್ಯಮಿಗಳೇನಾದರೂ ಕಪ್ಪು ಹಣವನ್ನು ವಾಪಾಸು ತರಿಸಲು ಸರಕಾರದ ಮೇಲೆ ಒತ್ತಡ ಹಾಕಬಾರದೇ? ಅವರಿಗೆ ಉಪವಾಸ ಸತ್ಯಾಗ್ರಹ ಮಾಡುವ ಹಕ್ಕಿಲ್ಲವೇ? ಬಾಬಾ ರಾಮದೇವ್ ಸನ್ಯಾಸಿಯೇ ಅಲ್ಲಾ ಉದ್ಯಮಿ ಎಂದು ಕರೆಯುವ ನೀವು ಅಂದರೆ ರಾಜಕಾರಣಿಗಳೂ ಈಗ ಉದ್ಯಮಿಗಳಾಗಿಲ್ಲವೇ? ನೀವು ಜನ ಸೇವಕರೇ?
ನನಗನಿಸುವ ಮಟ್ಟಿಗೆ ಬಾಬಾ ರಾಮದೇವ್ ಒಬ್ಬ ಭಾರತೀಯ ಸಂಸ್ಕೃತಿಯ ಪಾಲಕ ಹಾಗೂ ನಿಜವಾದ ಪ್ರತಿಪಾದಕರಂತೆ ಕಾಣುತ್ತಾರೆ. ಹಾಗಂತ ಬಾ ಬಾ ಅವರು ಒಬ್ಬ ಮಹಾತ್ಮ, ಎಲ್ಲಾ ಆರೋಪಗಳಿಂದ ಮುಕ್ತ, ಇತ್ಯಾದಿ-ಇತ್ಯಾದಿ ಎಂದು ನಾನು ಹೇಳಬಯಸುವುದಿಲ್ಲ. ಆದರೆ ಅವರೊಬ್ಬ ನಿಜವಾದ ಯೋಗ ಗುರು, ಮತ್ತು ಸಮಾಜದ ಬಗ್ಗೆ ಕಿಂಚಿತ್ ಕಳಕಳಿ ಇರುವ ವ್ಯಕ್ತಿ. ದಿಗ್ವಿಜಯ್ ಹೇಳಿದ ಹಾಗೆ ಯೋಗ ಶಿಬಿರಗಳಿಗೆ ರಾಮದೇವ್ ಹಣ ಪಡೆಯುವ ವಿಚಾರ ನನಗೆ ಗೊತ್ತಿಲ್ಲ; ಯೇಕೆಂದರೆ, ನನ್ನ ಸುತ್ತ-ಮುತ್ತ ನಾನು ಅನೇಕ ಯೋಗ ತರಬೇತಿ ನೀಡುವವರನ್ನು ನೋಡಿದ್ದೇನೆ. ಅವರಲ್ಲಿ ಹೆಚ್ಚಿನ ಜನ ಬಾಬಾ ರಾಮದೇವ್ ಅವರ ಪತಂಜಲಿ ಯೋಗ ಆಶ್ರಮದಿಂದಲೇ ಕಲಿತು ಬಂದವರು. ಅವರಲ್ಲಿ ಕೆಲವರು ಉಚಿತವಾಗಿ ಯೋಗ ಕಲಿಸುತ್ತಾರೆ. ಇದನ್ನು ನೋಡಿದರೆ ದಿಗ್ವಿಜಯ್ ಮಾತನ್ನು ನಂಬಲು ಸಾದ್ಯವಿಲ್ಲ.
ಮತ್ತೊಂದು ಪ್ರಮುಖ ವಿಚಾರವೆಂದರೆ, ಉಪವಾಸ ಸತ್ಯಾಗ್ರಹಗಳು ಭ್ರಷ್ಟಾಚಾರವನ್ನು ತಡೆಗಟ್ಟುವಲ್ಲಿ ಯಾವುದೇ ಪಾತ್ರವಹಿಸುವುದಿಲ್ಲವೆಂದಾದರೆ, ಅವು ಒಂದು ದೇಶ ಸ್ವತಂತ್ರಪಡೆಯುವುದಕ್ಕೆ ಹೇಗೆ ನೆರವಾಗಬಲ್ಲವು? ಒಂದು ಕಾಲಕ್ಕೆ ಮಹಾತ್ಮಾ ಗಾಂಧಿಯವರು ಮುನ್ನಡೆಸಿದ ಕಾಂಗ್ರೆಸ್ ಪಕ್ಷದಲ್ಲಿ ಒಂದು ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಇಂತಹಾ ಹೇಳಿಕೆ ನೀಡಲು ದಿಗ್ವಿಜಯ್ ಸಿಂಗ್ ಅವರಿಗೆ ನಾಚಿಕೆಯಾಗುವುದಿಲ್ಲವೇ? ಈ ಉಪವಾಸ ಸತ್ಯಾಗ್ರಹ ಮಹಾತ್ಮಾ ಗಾಂಧಿಯವರ ಕೂಸಲ್ಲವೇ? ಇನ್ನು ಕಾಂಗ್ರೆಸ್ ಪಕ್ಷ ಬಾಬಾ ಅವರಿಗೆ ಹೆದರಿದ್ದರೆ ಅವರನ್ನೇ ಜೈಲಿಗೆ ಕಳಿಸುತ್ತಿದ್ದೆವು ಎಂಬ ದಿಗ್ವಿಜಯ್ ಮಾತು ದುರಹಂಕಾರದ ಪರಮಾವದಿ ಅಲ್ಲವೇ? ಒಂದು ವೇಳಿ ಹಾಗೆ ಮಾಡಿದರೆ ಬ್ರಿಟೀಷ್ ಸರಕಾರಕ್ಕೂ ಭಾರತೀಯ ಕಾಂಗ್ರೆಸ್ ಸರಕಾರಕ್ಕೂ ನಡುವೆ ಏನು ವ್ಯತ್ಯಾಸ?

ರಾಮದೇವ್ ಅವರಿಗೆ ಆರ್‌ಎಸ್‌ಎಸ್ ತನ್ನ ಬೆಂಬಲ ವ್ಯಖ್ತಪಡಿಸಿರುವುದು ಕಾಂಗ್ರೆಸ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೇ ಯಾರೋ ಒಬ್ಬರನ್ನೋ ಅಥವಾ ಒಂದು ವರ್ಗವನ್ನೋ ತೃಪ್ತಿಪಡಿಸಲು ಮನಬಂದಂತೆ ಹೇಳಿಕೆಗಳನ್ನು ನೀಡುವುದು ಕೆಲವು ಕಾಂಗ್ರೆಸ್ ನಾಯಕರ ಹಳೆಯ ಚಾಳಿಯೂ ಹೌದು. ಅದಲ್ಲದೇ ಮೂಲೆಗುಂಪಾಗುತ್ತಿರುವ ಇಂತಹ ಕೆಲವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲೂ ಸಹ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಎಲ್ಲೋ ಒಂದು ಕಡೆ ಅವರು ತಮ್ಮ ಉಳಿವಿಗೆ ಇವುಗಳೇ ಕಾರಣ ಎಂಬ ಭ್ರಮೆಯಲ್ಲಿದ್ದಂತೆ ತೋರುತ್ತದೆ ಅಲ್ಲವೇ?


ಇನ್ನು ಕಾಂಗ್ರೆಸ್ ಅಥವಾ ಯುಪಿಏ ಬಾಬಾ ಅವರ ಹೋರಾಟಕ್ಕೆ ಹೆದರದೇ ಇದ್ದರೆ, ಕೇಂದ್ರ ಸರಕಾರವೇಕೆ ನಾಲ್ಕು ಮಂದಿ ಸಚಿವರು, ಸಂಪುಟ ಕಾರ್ಯದರ್ಶಿಗಳನ್ನೆಲ್ಲಾ
ವಿಮಾನ ನಿಲ್ದಾಣಕ್ಕೆ ಕಳುಹಿಸಿ ಸ್ವಾಗತಿಸಬೇಕಿತ್ತು ಎಂಬುದು ಅರ್ಥವಾಗುತ್ತಿಲ್ಲ.

ಈ ಮರ್ಕಟ ಮನಸ್ಸಿನ ರಾಜಕಾರಣಿಗಳು ಇನ್ನಾದರು ಇಂತಹ ದುರ್ಬುದ್ಧಿಯನ್ನು ಬಿಟ್ಟು ಜನಸೇವೆ ಮತ್ತು ದೇಶಸೇವೆಗಳನ್ನು ಕಿಂಚಿತ್ ಆದರೂ ಮಾಡಲಿ ಎಂದು ಆಶಿಸೋಣ ಅಲ್ಲವೇ?

ಯುಪಿಎ-ಕಾಂಗ್ರೆಸ್ ನಡುವೆ ಸಂಘರ್ಷ
ಈ ನಡುವೆ, ಬಾಬಾ ರಾಮದೇವ್ ಅವರು ಉಜ್ಜೈನಿಯಿಂದ ದೆಹಲಿಗೆ ಬಂದಿಳಿದಾಗ ನಾಲ್ಕು ಮಂದಿ ಮಂತ್ರಿ ಮಹೋದಯರು ವಿಮಾನ ನಿಲ್ದಾಣಕ್ಕೇ ಹೋಗಿ, ಬಾಗಿ ಸ್ವಾಗತಿಸಿರುವುದು ಕಾಂಗ್ರೆಸ್ ಮತ್ತು ಯುಪಿಎ
ಸರಕಾರ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ.

ವಿದೇಶದಲ್ಲಿರುವ ಕಪ್ಪು ಹಣದ ವಾಪಸಾತಿಗೆ ಒತ್ತಾಯಿಸಿ ಬಾಬಾ ರಾಮದೇವ್ ಅವರು ಶನಿವಾರದಿಂದ ನಡೆಸಲಿರುವ ಆಮರಣಾಂತ ಉಪವಾಸ ಸತ್ಯಾಗ್ರಹವು ಕೇಂದ್ರ ಸರಕಾರದಲ್ಲಿ ತೀವ್ರ ಕಳವಳ ಸೃಷ್ಟಿಸಿತ್ತು.
ಈ ಬಗ್ಗೆ ಗುರುವಾರ ಸರಕಾರದ ಉನ್ನತ ಮಟ್ಟದ ಸಭೆ ನಡೆಯುತ್ತಿದೆ. ಬಾಬಾ ಮನವೊಲಿಕೆ ನಿಟ್ಟಿನಲ್ಲಿ ನಾಲ್ಕು ಮಂದಿ ಹಿರಿಯ ಸಚಿವರಾದ ಪ್ರಣಬ್ ಮುಖರ್ಜಿ, ಕಪಿಲ್ ಸಿಬಲ್, ಪ್ರಬೋಧ್ ಕಾಂತ್ ಸಹಾಯ್
ಮತ್ತು ಪಿ.ಕೆ.ಬನ್ಸಾಲ್ ಜತೆಗೆ ಸಂಪುಟ ಕಾರ್ಯದರ್ಶಿಗಳನ್ನೆಲ್ಲರನ್ನೂ ವಿಮಾನ ನಿಲ್ದಾಣಕ್ಕೆ ಕಳುಹಿಸಿರುವುದು ಯುಪಿಎಯಲ್ಲಿ ಅಸಮಾಧಾನ ಏಳಲು ಕಾರಣವಾಗಿದೆ.

ಬಾಬಾ ಅವರಿಗೆ ಇಷ್ಟು ಭರ್ಜರಿಯಾಗಿ ಸ್ವಾಗತ ಕೋರಿರುವುದರ ಬಗ್ಗೆ ಟೀಕೆಗಳು ಕೇಳಿಬರತೊಡಗಿದಂತೆ, ಈ ವಿಷಯದಿಂದ ದೂರ ಸರಿಯಲು ಕಾಂಗ್ರೆಸ್ ಪ್ರಯತ್ನಿಸಿತು. ಮಂತ್ರಿಗಳೇ ವಿಮಾನ ನಿಲ್ದಾಣಕ್ಕೆ
ಹೋಗುತ್ತಾರೆಂಬ ಸಂಗತಿ ನಮಗೆ ಗೊತ್ತೇ ಇರಲಿಲ್ಲ ಎಂದಿವೆ ಕಾಂಗ್ರೆಸ್ ಮೂಲಗಳು.

ಆರೆಸ್ಸೆಸ್ ಕೂಡ ಬೆಂಬಲ...
ಕಾಂಗ್ರೆಸ್‌ನ ಚಿಂತೆಗೆ ಕಾರಣವಾಗಿರುವ ಸಂಗತಿಯೆಂದರೆ ಬಾಬಾ ರಾಮದೇವ್ ಹೋರಾಟಕ್ಕೆ ಆರೆಸ್ಸೆಸ್ ಕೂಡ ಬೆಂಬಲ ಘೋಷಿಸಿರುವುದು. ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಆರೆಸ್ಸೆಸ್ ಕಾರ್ಯಕರ್ತರೆಲ್ಲರೂ
ಬಾಬಾ ರಾಮದೇವ್ ಜೊತೆಗೆ ಸೇರುತ್ತಾರೆ ಎಂದು ಆರೆಸ್ಸೆಸ್ ವಕ್ತಾರ ರಾಮಮಾಧವ್ ಘೋಷಿಸಿದ್ದಾರೆ.

ಈ ಕಾರಣಕ್ಕೆ ಇಂದು ತುರ್ತು ಸಭೆ ಸೇರಿರುವ ಉನ್ನತ ಮಟ್ಟದ ನಾಯಕರು, ಈ ವಿಷಯದ ಕುರಿತು ಜಾಗರೂಕ ಹೆಜ್ಜೆಯಿಡುವ ಕುರಿತು ಚಿಂತಿಸಲಿದ್ದಾರೆ.