"ಸಿರಿನುಡಿ" ಇದೊಂದು ಕನ್ನಡ ಅಂತರಜಾಲ ತಾಣ ಇಲ್ಲಿ ಕನ್ನಡ ಸಾಹಿತ್ಯಕ್ಕೆ ಸಂಭಂದ ಪಟ್ಟ ಅನೇಕ ಮಾಹಿತಿಗಳು ಸಿಗುತ್ತವೆ. ಇಲ್ಲಿನ ಲೇಖನ ಗಳನ್ನು 'DJVU' ಫಾರ್ಮ್ಯಾಟಿನಲ್ಲಿ ನೀಡಿದ್ದಾರೆ. ಸಹೃದಯೀ ಕನ್ನಡ ಸಾಹಿತ್ಯಾಸಕ್ತರು ತಮ್ಮ ಪುಸ್ತಕ ಓದುವಂತೆಯೇ ಇಲ್ಲಿನ ಲೇಖನಗಳನ್ನು ಓದಬಹುದು. ಬಹಳ ಮುಖ್ಯ ಸಂಗತಿ ಎಂದರೆ ಇಲ್ಲಿನ ಲೇಖನಗಳು ಯುನಿಕೋಡ್ನಲ್ಲೂ ಲಭ್ಯವಿದೆ. ಇದನ್ನು ಕನ್ನಡ "ಟೆಕ್ಸ್ಟ್ ಟು ಸ್ಪೀಚ್" (Text To Speech) ಅನ್ನು ಬಳಸಿ ಕಣ್ಣು ಕಾಣದವರೂ, ಅನಕ್ಷರಸ್ತರೂ ಸಹಾ ಓದಬಹುದಾಗಿದೆ. ಇಲ್ಲಿ ಅನೇಕ ವಿಚಾರಗಳ ಕುರಿತು ಲೇಖನಗಳಿವೆ. ಮುಖ್ಯವಾಗಿ ಹೇಳುವುದಾದರೆ, ಪ್ರಜಾವಾಣಿಯ ಹಳತು-ಹೊನ್ನು ಅಂಕಣದಲ್ಲಿ ಪರಿಚಯಿಸಲ್ಪಟ್ಟ ಪುಸ್ತಕಗಳು, ಅವಧೂತ ಶ್ರೇಷ್ಠರಾದ ಶ್ರೀ ಶ್ರೀ ನಿರಂಜನಾನಂದ ಸರಸ್ವತಿ ಗುರು ಮಹಾರಾಜರ ಸಂದೇಶೋಪದೇಶ ಸಾಹಸ್ರಿ ಗ್ರಂಥ ಧ್ಯಾನ ಮಿಂಚು, ಡಾ.ಹೆಚ್.ರಾಮಚಂದ್ರಸ್ವಾಮಿರವರ ಮಹಾಭಾರತಕಥಾಸಂಗ್ರಹ, All India Magazine ಮಾಸ ಪತ್ರಿಕೆಯ ಕನ್ನಡ ಅನುವಾದ ಅಖಿಲ ಭಾರತದ ಪತ್ರಿಕೆ, ಅನುಪಮಾ ನಿರಂಜನರವರ ದಿನಕ್ಕೊಂದು ಕಥೆ, ಗೋಪಾಲಕೃಷ್ಣ ಅಡಿಗರು ಆರಂಭಿಸಿ ಬೆಳೆಸಿದ ಸಾಕ್ಷಿ ಪತ್ರಿಕೆಯ ಎಲ್ಲಾ ಸಂಚಿಕೆಗಳು, ಇತ್ಯಾದಿ. ಹೀಗೆ ಹತ್ತು ಹಲವು ಲೇಖನ/ಮಾಹಿತಿ ತುಂಬಿದ ಜಾಲತಾಣ ಸಿರಿನುಡಿ. ಅಂದರೆ "ಈ ಕನ್ನಡ" ವನ್ನು ಬೆಳಸುತತ್ತಿರುವ ಸಿರಿನುಡಿ.
ಇಷ್ಟೆಲ್ಲಾ ಹೇಳಿದ ಮೇಲೆ "ಇಲ್ಲಿ ನಂಗೇನಿಷ್ಟ" ಅಂತ ನಾನೇ ಹೇಳಬೇಕಲ್ಲವೇ? ಹೇಳುತ್ತೇನೆ. ಆದರೆ ಅದರ ಜೊತೆ ನೀವೂ ಸಿರಿನುಡಿ ಜಾಲತಾಣವನ್ನು ಸಂದರ್ಶಿಸಿ ಅಲ್ಲಿ ನಿಮಗೇನಿಷ್ಟ ಅಂತ ದಯವಿಟ್ಟು ನಂಗೂ ಹೇಳಿ!
ಇಲ್ಲಿ ನನಗೆ ಅತ್ಯಂತ ಇಷ್ಟವಾದ ಲೆಖನ/ಪುಸ್ತಕ: ಡಾ.ಹೆಚ್.ರಾಮಚಂದ್ರಸ್ವಾಮಿರವರ ಮಹಾಭಾರತಕಥಾಸಂಗ್ರಹ.
ನಾನು ಇಲ್ಲಿ ನಿರಂತರವಾಗಿ ಓದ ಬಯಸುವ ಇನ್ನೊಂದು ವಿಭಾಗವೆಂದರೆ ಅನುಪಮಾ ನಿರಂಜನರವರ ದಿನಕ್ಕೊಂದು ಕಥೆ.
ಮಾಹಿತಿಯನ್ನು ನೀಡುವ ಮೂಲಕ ಮನಸೂರೆ ಮಾಡಿರುವ ಇನ್ನೊಂದು ಪ್ರಮುಖವಿಭಾಗವೆಂದರೆ 1918 ರಲ್ಲಿ ಪ್ರಕಟವಾದ ವಿಜ್ಞಾನ ಮಾಸಪತ್ರಿಕೆ, ಸಂಪಾದಕರು: ಬೆಳ್ಳಾವೆ ವೆಂಕಟನಾರಾಣಪ್ಪನವರು ಮತ್ತು ಎನ್. ವೆಂಕಟೇಶಯ್ಯಂಗಾರ್ಯರು.
ಇದೆಲ್ಲಕ್ಕೂ ಮಿಗಿಲಾಗಿ ಇಲ್ಲಿನ ಲೇಖನಗಳಲ್ಲಿ ಪದಗಳನ್ನು ಹುಡುಕಲು ಓಸೀಆರ್ ತಂತ್ರಜ್ಞಾನದ ಸಹಾಯವೂ ದೊರೆಯುತ್ತದೆ. ಓಸೀಆರ್ ತಂತ್ರಜ್ಞಾನದ ಬಗ್ಗೆ ಮುಂದಿನ ದಿನಗಳಲ್ಲಿ ಒಂದು ವಿಸ್ತೃತ ಬರಹವನ್ನೇ ಬರೆಯುತ್ತೇನೆ. ಅಷ್ಟರೊಳಗೆ ನೀವೇ ಇದರ ಬಗ್ಗೆ ಹುಡುಕುವ ಪ್ರಯತ್ನ ಮಾಡಿ. ಈ ವಿಷಯದಲ್ಲಿ ನಿಮ್ಮ ಕುತೂಹಲವನ್ನು ಸ್ವಲ್ಪ ಉಳಿಸುವ ಆಸೆ ನನ್ನದು.
ಇದೆಲ್ಲದರೊಟ್ಟಿಗೆ ನಾನು ಬೇಳೂರು ಸುದರ್ಶನ ಅವರಿಗೆ ಹೃತ್ಪೂರ್ವಕ ವಂದನೆಗಳನ್ನರ್ಪಿಸಲು ಬಯಸುತ್ತೇನೆ. ಏಕೆಂದರೆ ಇವರು ನನಗೆ ಕನ್ನಡದ ಓಸೀಆರ್ ತಂತ್ರಜ್ಞಾನಕ್ಕೆ ಕೆಲಸ ಮಾಡುತ್ತಿರುವ ಮೈಸೂರಿನ ಯೋಗಾನಂದ ಅವರನ್ನು ಪರಿಚಯಿಸಿದರು. ಯೋಗಾನಂದರವರು ಇನ್ನೂ ಅನೇಕ ಪುಸ್ತಕಗಳನ್ನು ನನ್ನ ಹಾಗು ಎಲ್ಲರ ವಿಶೇಷವಾಗಿ ಎಲ್ಲಾ ಅಂಧರ ಅನುಕೂಲಕ್ಕಾಗಿ Electronic book ರೂಪಕ್ಕೆ ಪರಿವರ್ತಿಸಿಕೊಡುವ ಭರವಸೆನೀಡಿದ್ದಾರೆ. ಕಣಜ ಜಾಲತಾಣದ ಸಮನ್ವಯಕಾರರಾಗಿರುವ ಬೇಳೂರು ಸುದರ್ಶನ ಅವರ ಬಗ್ಗೆಹಾಗು ಮೈಸೂರಿನ ಜಯಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಆಗಿರುವ ಕನ್ನಡ ಓಸೀಆರ್ ತಂತ್ರಜ್ಞಾನವನ್ನು ತಯಾರಿಸುತ್ತಿರುವ ಯೋಗಾನಂದ ಅವರುಗಳ ಬಗ್ಗೆ ಮುಂದೊಂದು ದಿನ ಖಂಡಿತಾ ಬರೆಯುತ್ತೇನೆ. ಈಗ ಸಮಯ ಬಹಳವಾಯಿತು. ಇತ್ತೀಚೆಗೆ ಮೊದಲಿನಂತೆ ಬೇಕಾದಷ್ಟು ಸಮಯ ನನಗೆ ಸಿಗುತ್ತಿಲ್ಲ. ಬೇರೆ ಬೇರೆ ಕೆಲಸಗಳಲ್ಲಿ ಹಾಗೂ ಉನ್ನತ ವಿದ್ಯಾಭ್ಯಾಸಗಳಲ್ಲಿ ತೊಡಗಿದ್ದೇನೆ. ಅವನ್ನೂ ಶೀಘ್ರದಲ್ಲಿ ಬರೆಯುತ್ತೇನೆ.
Showing posts with label Kannada. Show all posts
Showing posts with label Kannada. Show all posts
Saturday, August 6, 2011
Tuesday, March 15, 2011
ನಾನು ಮತ್ತು ನನ್ನ ಅಂಧತ್ವ.
Dear all here I tried to tell about me and my blindness in my mother tongue kannada. Here I have given an introduction about me, my education, and the factors which influenced my life. I also told about my nature of extra criticism of the things which I don't like.
ನಾನು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಅಬಸಿ ಎಂಬ ಹಳ್ಳಿಯೊಂದರ ಮಧ್ಯಮ ವರ್ಗದ ಕುಟುಂಬದವನು. ನಾನು ಹುಟ್ಟಿದ ಮೂರು-ನಾಲ್ಕು ತಿಂಗಳುಗಳ ಕಾಲ ನನ್ನ ಅಂಧತ್ವ ನನ್ನ ತಂದೆ ತಾಯಿಯರಿಗೆ ಗೊತ್ತಾಗಲೇ ಇಲ್ಲ. ಆದರೆ ಸತ್ಯ ಎಷ್ಟು ದಿನ ಹೊರ ಬರದೇ ಹಾಗೆಯೇ ಇರುತ್ತದೆ? ಒಂದು ದಿನ ಯಾವುದೋ ಕಾರಣಕ್ಕೆ ಅನುಮಾನ ಬಂದು ನನ್ನನ್ನು ಕಣ್ಣಿನ ವೈಧ್ಯರ ಬಳಿಗೆ ಕರೆದೊಯ್ದಾಗ ನನಗಿದ್ದ ದೃಷ್ಟಿ ದೋಶದ ಬಗೆಗೆ ಅವರಿಗೆ ತಿಳಿಯಿತು. ಆಗ ಆ ಕಣ್ಣಿನ ವೈಧ್ಯರು ನನ್ನ ದೃಷ್ಟಿ ತೀರಾ ದುರ್ಬಲವಾಗಿದೆ ಎಂದು ಒಂದು ಕನ್ನಡಕ ಕೊಟ್ಟರು. ಆದರೆ ನನಗೆ ತಿಳಿದ ಮಟ್ಟಿಗೆ ಅದು ಉಪಯೋಗವಾಗಲಿಲ್ಲ. ಅಂದರೆ ನನಗೆ ತಿಳಿದಂತೆ ನಾನು ಸ್ವಲ್ಪ ಬೆಳಕನ್ನು ಬಿಟ್ಟರೆ ಇನ್ನೇನನ್ನು ನೋಡಿಲ್ಲ. ಆ ಕಾಲದಲ್ಲಿ ನನ್ನ ಪೋಷಕರಿಗೆ ಅಂಧರಬಗ್ಗೆ ಹಾಗು ಅವರ ಶಿಕ್ಷಣದಬಗ್ಗೆ ಅಷ್ಟೊಂದು ಗೊತ್ತಿರಲಿಲ್ಲ. ಆ ಸಮಯದಲ್ಲಿ ಅವರು ನನ್ನನ್ನು ಕರೆದುಕೊಂಡು ಅನೇಕ ವೈಧ್ಯರ ಬಳಿ ಅಲೆದಾಡಿದರು. ಅಲೋಪತಿ, ಆಯುರ್ವೇದ, ಹೋಮಿಯೋಪತಿ ಹೀಗೆ ಕಂಡ ಕಂಡ ವೈಧ್ಯಕೀಯ ಪದ್ಧತಿಯನ್ನು ನಂಬಿಕೊಂಡು ಆಯಾ ಪದ್ಧತಿಗಳ ವೈಧ್ಯರ ಬಳಿಗೆ ನನ್ನನ್ನು ಕರೆದುಕೊಂಡು ಹೋದರು. ಆದರೆ ದುರದೃಷ್ಟವಶಾತ್ ಯಾವುದೇ ಪ್ರಯೋಜನವಾಗಲಿಲ್ಲ. ಈ ಮಧ್ಯದಲ್ಲಿ ನನಗೆ ಆರು ವರ್ಷ ತುಂಬುವ ಹೊತ್ತಿಗೆ ನಮ್ಮ ಊರಿನ ಬಳಿಯಲ್ಲೇ ಸಿದ್ಧಾಪುರ ಎಂಬಲ್ಲಿ ಅಂಧರಿಗಾಗಿಯೇ ಒಂದು ಶಾಲೆ ಪ್ರಾರಂಭವಾಯಿತು. ಆ ಶಾಲೆಗೆ ನಾನೇ ಮೊದಲ ವಿದ್ಯಾರ್ಥಿ. ಅಲ್ಲಿ ನಾನು ಬ್ರೈಲ್ ಎಂಬ ಅಂಧರಿಗಾಗಿಯೇ ಇರುವ ವಿಶೇಷ ಲಿಪಿಯಲ್ಲಿ ನನ್ನ ಶಿಕ್ಷಣವನ್ನು ಆರಂಭಿಸಿದೆ. ಈ ಹಂತದಲ್ಲಿ ನನಗೆ ನಾನು ಬೇರೆಯವರಿಗಿಂತ ವಿಭಿನ್ನವಾದ ಪದ್ಧತಿಯಲ್ಲಿ ಕಲಿಯುತ್ತಿರುವುದು ಅರಿವಿಗೆ ಬಂತು. ನಾನು ಶಾಲೆಯ ಬಗ್ಗೆ ನನ್ನದೇ ಆದ ಕೆಲವು ಕಲ್ಪನೆಗಳನ್ನು ಹೊಂದಿದ್ದೆ. ಏಕೆಂದರೆ ನಾನು ಸುಮಾರು ನಾಲ್ಕೈದು ವರ್ಷದವನಾಗಿದ್ದಾಗಿನಿಂದಲು ನನ್ನ ದೊಡ್ಡಪ್ಪನ ಮಗಳು ಅಂದರೆ ನನ್ನ ಅಕ್ಕನ ಶಾಲೆಗೆ ಆಗಾಗ ಹೋಗುತ್ತಿದ್ದೆ. ಆದರೆ ಆ ಶಾಲೆಯ ವಾತಾವರ್ಣ ಮತ್ತು ಈ ಶಾಲೆಯ ವಾತಾವರ್ಣಗಳು ಬೇರೆ ಬೇರೆಯಾಗಿದ್ದಿದ್ದು ನನ್ನ ಆ ಪುಟ್ಟ ಮನಸ್ಸಿಗೂ ಅರಿವಿಗೆ ಬಂತು. ಬಹುಶಹ ನಾನು ಈಗಿನಷ್ಟು ದೊಡ್ಡವನಾಗಿದ್ದರೆ ನನ್ನ ಅಪ್ಪನನ್ನು ಕೇಳುತ್ತಿದ್ದೆನೋ ಏನೋ! ಗೊತ್ತಿಲ್ಲ. ಆದರೆ ಅಲ್ಲಿನ ಶಿಕ್ಷಣಕ್ಕೆ ನಾನು ಹೊಂದಿಕೊಂಡು ನಾನೂ ಬ್ರೈಲ್ ಕಲಿಯತೊಡಗಿದೆ. ನನ್ನ ಮನಸ್ಸು ಪ್ರೌಢವಾಗುವ ಹೊತ್ತಿಗಾಗಲೆ ನನಗೆ ಅರಿವಿಲ್ಲದಂತೆ ನನಗೆ ಆತ್ಮವಿಶ್ವಾಸ ಬಂದು ಬಿಟ್ಟಿತ್ತು. ಬಹುಶಹಾ ಇದಕ್ಕೆ ನನ್ನ ಮನೆಯವರೆಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ಕಾರಣರೇ!
ನಾನು ಓದುತ್ತಿದ್ದ ಸಮಯದಲ್ಲಿ ನನಗೆ ಬೇಕಾದ ಪುಸ್ತಕಗಳು ಬ್ರೈಲ್ ಲಿಪಿಯಲ್ಲಿ ಲಭ್ಯವಿರಲಿಲ್ಲ. ಆ ಸಮಯದಲ್ಲಿ ನನ್ನ ಅಜ್ಜನಿಂದ ಹಿಡಿದು ನಮ್ಮ ಮನೆಯ ಎಲ್ಲರೂ ನನಗೆ ಓದಿ ಹೇಳಿ ತುಂಬಾ ಸಹಾಯ ಮಾಡಿದರು. ಅವರೆಲ್ಲರ ನೆರವಿನ್ಇಂದ ಮತ್ತು ನನ್ನ ಗುರುಗಳ ಮಾರ್ಗದರ್ಶನದಿಂದ ನಾನು ನನ್ನ ಪ್ರಾಥಮಿಕ ಶಿಕ್ಷಣವನ್ನು ಸಿದ್ಧಾಪುರದಲ್ಲಿ ಮುಗಿಸಿದೆ. ನಂತರ ಮುಂದಿನ ವಿದ್ಯಾಭ್ಯಾಸವನ್ನು ಚಿಕ್ಕಮಗಳೂರಿನ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಮುಗಿಸಿದೆ. ನಾನು ೧೦ನೆ ತರಗತಿ ಮುಗಿಸುವ ಹೊತ್ತಿಗೆ ನನಗೆ ಕಂಪ್ಯೂಟರಿನ ಬಗ್ಗೆ ಮತ್ತು ಅದನ್ನು ಅಂಧರು ಹೇಗೆ ಬಳಸುತ್ತಾರೆಂಬ ಬಗ್ಗೆ ತಿಳಿಯಿತು. ಕಂಪ್ಯೂಟರಿನಲ್ಲೇ ನನ್ನ ಶಿಕ್ಶಣ ಮುಂದುವರಿಸುವುದಾಗಿ ತೀರ್ಮಾನಿಸಿ ಮೈಸೂರಿನ ಜೆ.ಜೆ.ಎಸ್. ಪಾಲಿಟೆಕ್ನಿಕ್ ಫಾರ್ ಫಿಜಿಕಲಿ ಹ್ಯಾಂಡೀಕ್ಯಾಪ್ಡ್ ಸೇರಿದೆ. ಅಲ್ಲಿ ನನ್ನ ಕಂಪ್ಯೂಟರ್ ಡಿಪ್ಲೊಮಾವನ್ನು ಪೂರೈಸಿ ಮೆಡಿಕಲ್ ಟ್ರಾನ್ಸ್ಕ್ರಿಪ್ಶನಿಷ್ಟ್ಆಗಿ ಸ್ವಲ್ಪ ದಿನ ಕೆಲಸ ಮಾಡಿದೆ. ಈಗ ಅದೆಲ್ಲವನ್ನೂ ಬಿಟ್ಟು ಈಸ್ಪೀಕ್ ಎಂಬ ಟಿ.ಟಿ.ಎಸ್ ತಂತ್ರಾಂಶದಲ್ಲಿ ಕನ್ನಡ ಭಾಷೆಯನ್ನು ಸೇರಿಸುವಲ್ಲಿ ಕೆಲಸ ಮಾಡುತ್ತಿದ್ದೇನೆ.
ನನ್ನ ಪ್ರಾಥಮಿಕ ಶಿಕ್ಶಣದ ಸಮಯದಲ್ಲಿ ನನ್ನ ಮನೆಯಲ್ಲಿ ನನಗೆ ಕೆಲವು ಮಹಾತ್ಮರ ಜೀವನ ಚರಿತ್ರೆಗಳು ಮತ್ತು ರಾಮಾಯಣ, ಮಹಾಭಾರತದಂತಹ ಪುರಾಣಗಳನ್ನೂ ಮತ್ತು ಕೆಲವು ಪತ್ರಿಕೆಗಳಲ್ಲಿ ಬರುವ ಲೇಖನಗಳನ್ನೂ ಓದಿ ಹೇಳುತ್ತಿದ್ದರು. ಅಲ್ಲದೇ ಟೀವೀ ಮತ್ತು ರೇಡಿಯೋಗಳನ್ನು ಕೇಳುತ್ತಿದ್ದೆ. ಇವುಗಳಿಂದಾಗಿ ನನ್ನ ಸಾಮಾನ್ಯ ಜ್ಞಾನ ಮತ್ತು ವೈಚಾರಿಕತೆ ಬೆಳೆಯಿತು. ಈ ಮದ್ಯೆ ನಾನು ಕಂಪ್ಯೂಟರ್ ಕಲಿತೆ. ಇದು ಮಹಾ ಜ್ಞಾನಭಂಡಾರವನ್ನೇ ನನ್ನ ಮುಂದೆ ತೆರೆದಿಟ್ಟಿತು. ಆದರೆ ನಾನು ಕನ್ನಡದಲ್ಲಿರುವ ಪಠ್ಯವನ್ನು ಕಂಪ್ಯೂಟರಿನ ಸಹಾಯದಿಂದ ಓದಲಾಗುತ್ತಿರಲಿಲ್ಲ. ಏಕೆಂದರೆ ನಾನು ಅಂಧನಾಗಿರುವುದರಿಂದ ಕಂಪ್ಯೂಟರಿನ್ಅ ಪರದೆಯ ಮೇಲೆ ಮೂಡುವ ಅಕ್ಶರಗಳನ್ನು ಧ್ವನಿ ರೂಪಕ್ಕೆ ಬದಲಾಯಿಸುವ ವಿಶೇಶ ತಂತ್ರಾಂಶದ ನೆರವು ಬೇಕಾಗುತ್ತದೆ. ಆದರೆ ಈ ವರೆಗೆ ಅಂತಹಾ ತಂತ್ರಾಂಶವು ಇಂಗ್ಲೀಶ್ನಲ್ಲಿ ಮಾತ್ರ ಲಭ್ಯವಿತ್ತು. ಆದರೆ ಈಗ ಅದು ಕನ್ನಡಕ್ಕೂ ಲಭ್ಯವಿದೆ. ಇದನ್ನು ಕನ್ನಡಕ್ಕೆ ತರುವಲ್ಲಿ ನಾನು ಕೆಲಸ ಮಾಡಿದ್ದೇನೆ. ಆ ಬಗ್ಗೆ ಬೇರೆ ಯಾವಾಗಲಾದರೂ ಮಾತನಾಡೋಣ. ಇದರಿಂದಾಗಿ ಸಹಜವಾಗಿಯೇ ನಾನು ಎಲ್ಲವನ್ನು ಪ್ರಶ್ನೆ ಮಾಡತೊಡಗಿದೆ ಮತ್ತು ನನ್ನ ಮನಸ್ಸಿಗೆ ಸರಿ ಎನಿಸದ ವಸ್ತು ಮತ್ತು ವಿಚಾರಗಳನ್ನು ಠೀಕೆ ಮಾಡತೊಡಗಿದೆ. ಅದು ಈಗಲೂ ಹಾಗೆಯೇ ಮುಂದುವರಿದಿದೆ! ಬಹುಶಹಾ ಅಗತ್ಯಕಿಂತ ಸ್ವಲ್ಪ ಜಾಸ್ತಿ ಠೀಕಿಸಿಬಿಟ್ಟೆ ಎಂದೂ ಕೆಲವೊಮ್ಮೆ ನನ್ನ ಮನಸ್ಸಿಗೆ ಅನಿಸಿದ್ದುಂಟು. ಆದರೆ ಆಡಿದ ಮಾತನ್ನು ಹಿಂಪಡೆಯಲು ನಾನೇನು ರಾಜಕಾರಣಿಯೇ?!
ನನಗೆ ನನ್ನ ಶಾಲೆ ಮತ್ತು ಕಾಲೇಜಿನ ಅನುಭವಗಳನ್ನೂ ನಿಮ್ಮೊಂದಿಗೆ ಹಂಚಿಕೊಳ್ಳುವ ಆಸೆ, ಆದರೆ ಇವತ್ತಿಗೆ ಇಷ್ಟು ಸಾಕು. ಇಲ್ಲದ್ದಿದ್ದರೆ ಓದುತ್ತಿರುವ ನಿಮಗೆ ಮಾಹಿತಿಯ ಅಜೀರ್ಣ ಸಮಸ್ಯೆಯಾಗಬಹುದು! ಅಲ್ಲವೇ?
ಇಲ್ಲಿ ಹೇಳಿದ ಈಸ್ಪೀಕ್ನ ಬಗ್ಗೆ ಒಂದು ಆರ್ಟಿಕಲ್ ಈ ಬ್ಲಾಗ್ನಲ್ಲಿಯೇ ಬರೆದಿದ್ದೇನೆ ದಯವಿಟ್ಟು ಅದನ್ನು ನೋಡಿ.
In this article I focused on my education, but not in depth. I also have given information about Kannada TTS called eSpeak which was developed by mr. Jonathan duddington, A person from UK. He has included more than 70 languages in eSpeak. Kannada is also one amongst them. apart from that around 5-6 Indian languages are also available in that. For more information about eSpeak, please refer to an article regarding using Indian languages with NVDA and eSpeak.
ನಾನು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಅಬಸಿ ಎಂಬ ಹಳ್ಳಿಯೊಂದರ ಮಧ್ಯಮ ವರ್ಗದ ಕುಟುಂಬದವನು. ನಾನು ಹುಟ್ಟಿದ ಮೂರು-ನಾಲ್ಕು ತಿಂಗಳುಗಳ ಕಾಲ ನನ್ನ ಅಂಧತ್ವ ನನ್ನ ತಂದೆ ತಾಯಿಯರಿಗೆ ಗೊತ್ತಾಗಲೇ ಇಲ್ಲ. ಆದರೆ ಸತ್ಯ ಎಷ್ಟು ದಿನ ಹೊರ ಬರದೇ ಹಾಗೆಯೇ ಇರುತ್ತದೆ? ಒಂದು ದಿನ ಯಾವುದೋ ಕಾರಣಕ್ಕೆ ಅನುಮಾನ ಬಂದು ನನ್ನನ್ನು ಕಣ್ಣಿನ ವೈಧ್ಯರ ಬಳಿಗೆ ಕರೆದೊಯ್ದಾಗ ನನಗಿದ್ದ ದೃಷ್ಟಿ ದೋಶದ ಬಗೆಗೆ ಅವರಿಗೆ ತಿಳಿಯಿತು. ಆಗ ಆ ಕಣ್ಣಿನ ವೈಧ್ಯರು ನನ್ನ ದೃಷ್ಟಿ ತೀರಾ ದುರ್ಬಲವಾಗಿದೆ ಎಂದು ಒಂದು ಕನ್ನಡಕ ಕೊಟ್ಟರು. ಆದರೆ ನನಗೆ ತಿಳಿದ ಮಟ್ಟಿಗೆ ಅದು ಉಪಯೋಗವಾಗಲಿಲ್ಲ. ಅಂದರೆ ನನಗೆ ತಿಳಿದಂತೆ ನಾನು ಸ್ವಲ್ಪ ಬೆಳಕನ್ನು ಬಿಟ್ಟರೆ ಇನ್ನೇನನ್ನು ನೋಡಿಲ್ಲ. ಆ ಕಾಲದಲ್ಲಿ ನನ್ನ ಪೋಷಕರಿಗೆ ಅಂಧರಬಗ್ಗೆ ಹಾಗು ಅವರ ಶಿಕ್ಷಣದಬಗ್ಗೆ ಅಷ್ಟೊಂದು ಗೊತ್ತಿರಲಿಲ್ಲ. ಆ ಸಮಯದಲ್ಲಿ ಅವರು ನನ್ನನ್ನು ಕರೆದುಕೊಂಡು ಅನೇಕ ವೈಧ್ಯರ ಬಳಿ ಅಲೆದಾಡಿದರು. ಅಲೋಪತಿ, ಆಯುರ್ವೇದ, ಹೋಮಿಯೋಪತಿ ಹೀಗೆ ಕಂಡ ಕಂಡ ವೈಧ್ಯಕೀಯ ಪದ್ಧತಿಯನ್ನು ನಂಬಿಕೊಂಡು ಆಯಾ ಪದ್ಧತಿಗಳ ವೈಧ್ಯರ ಬಳಿಗೆ ನನ್ನನ್ನು ಕರೆದುಕೊಂಡು ಹೋದರು. ಆದರೆ ದುರದೃಷ್ಟವಶಾತ್ ಯಾವುದೇ ಪ್ರಯೋಜನವಾಗಲಿಲ್ಲ. ಈ ಮಧ್ಯದಲ್ಲಿ ನನಗೆ ಆರು ವರ್ಷ ತುಂಬುವ ಹೊತ್ತಿಗೆ ನಮ್ಮ ಊರಿನ ಬಳಿಯಲ್ಲೇ ಸಿದ್ಧಾಪುರ ಎಂಬಲ್ಲಿ ಅಂಧರಿಗಾಗಿಯೇ ಒಂದು ಶಾಲೆ ಪ್ರಾರಂಭವಾಯಿತು. ಆ ಶಾಲೆಗೆ ನಾನೇ ಮೊದಲ ವಿದ್ಯಾರ್ಥಿ. ಅಲ್ಲಿ ನಾನು ಬ್ರೈಲ್ ಎಂಬ ಅಂಧರಿಗಾಗಿಯೇ ಇರುವ ವಿಶೇಷ ಲಿಪಿಯಲ್ಲಿ ನನ್ನ ಶಿಕ್ಷಣವನ್ನು ಆರಂಭಿಸಿದೆ. ಈ ಹಂತದಲ್ಲಿ ನನಗೆ ನಾನು ಬೇರೆಯವರಿಗಿಂತ ವಿಭಿನ್ನವಾದ ಪದ್ಧತಿಯಲ್ಲಿ ಕಲಿಯುತ್ತಿರುವುದು ಅರಿವಿಗೆ ಬಂತು. ನಾನು ಶಾಲೆಯ ಬಗ್ಗೆ ನನ್ನದೇ ಆದ ಕೆಲವು ಕಲ್ಪನೆಗಳನ್ನು ಹೊಂದಿದ್ದೆ. ಏಕೆಂದರೆ ನಾನು ಸುಮಾರು ನಾಲ್ಕೈದು ವರ್ಷದವನಾಗಿದ್ದಾಗಿನಿಂದಲು ನನ್ನ ದೊಡ್ಡಪ್ಪನ ಮಗಳು ಅಂದರೆ ನನ್ನ ಅಕ್ಕನ ಶಾಲೆಗೆ ಆಗಾಗ ಹೋಗುತ್ತಿದ್ದೆ. ಆದರೆ ಆ ಶಾಲೆಯ ವಾತಾವರ್ಣ ಮತ್ತು ಈ ಶಾಲೆಯ ವಾತಾವರ್ಣಗಳು ಬೇರೆ ಬೇರೆಯಾಗಿದ್ದಿದ್ದು ನನ್ನ ಆ ಪುಟ್ಟ ಮನಸ್ಸಿಗೂ ಅರಿವಿಗೆ ಬಂತು. ಬಹುಶಹ ನಾನು ಈಗಿನಷ್ಟು ದೊಡ್ಡವನಾಗಿದ್ದರೆ ನನ್ನ ಅಪ್ಪನನ್ನು ಕೇಳುತ್ತಿದ್ದೆನೋ ಏನೋ! ಗೊತ್ತಿಲ್ಲ. ಆದರೆ ಅಲ್ಲಿನ ಶಿಕ್ಷಣಕ್ಕೆ ನಾನು ಹೊಂದಿಕೊಂಡು ನಾನೂ ಬ್ರೈಲ್ ಕಲಿಯತೊಡಗಿದೆ. ನನ್ನ ಮನಸ್ಸು ಪ್ರೌಢವಾಗುವ ಹೊತ್ತಿಗಾಗಲೆ ನನಗೆ ಅರಿವಿಲ್ಲದಂತೆ ನನಗೆ ಆತ್ಮವಿಶ್ವಾಸ ಬಂದು ಬಿಟ್ಟಿತ್ತು. ಬಹುಶಹಾ ಇದಕ್ಕೆ ನನ್ನ ಮನೆಯವರೆಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ಕಾರಣರೇ!
ನಾನು ಓದುತ್ತಿದ್ದ ಸಮಯದಲ್ಲಿ ನನಗೆ ಬೇಕಾದ ಪುಸ್ತಕಗಳು ಬ್ರೈಲ್ ಲಿಪಿಯಲ್ಲಿ ಲಭ್ಯವಿರಲಿಲ್ಲ. ಆ ಸಮಯದಲ್ಲಿ ನನ್ನ ಅಜ್ಜನಿಂದ ಹಿಡಿದು ನಮ್ಮ ಮನೆಯ ಎಲ್ಲರೂ ನನಗೆ ಓದಿ ಹೇಳಿ ತುಂಬಾ ಸಹಾಯ ಮಾಡಿದರು. ಅವರೆಲ್ಲರ ನೆರವಿನ್ಇಂದ ಮತ್ತು ನನ್ನ ಗುರುಗಳ ಮಾರ್ಗದರ್ಶನದಿಂದ ನಾನು ನನ್ನ ಪ್ರಾಥಮಿಕ ಶಿಕ್ಷಣವನ್ನು ಸಿದ್ಧಾಪುರದಲ್ಲಿ ಮುಗಿಸಿದೆ. ನಂತರ ಮುಂದಿನ ವಿದ್ಯಾಭ್ಯಾಸವನ್ನು ಚಿಕ್ಕಮಗಳೂರಿನ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಮುಗಿಸಿದೆ. ನಾನು ೧೦ನೆ ತರಗತಿ ಮುಗಿಸುವ ಹೊತ್ತಿಗೆ ನನಗೆ ಕಂಪ್ಯೂಟರಿನ ಬಗ್ಗೆ ಮತ್ತು ಅದನ್ನು ಅಂಧರು ಹೇಗೆ ಬಳಸುತ್ತಾರೆಂಬ ಬಗ್ಗೆ ತಿಳಿಯಿತು. ಕಂಪ್ಯೂಟರಿನಲ್ಲೇ ನನ್ನ ಶಿಕ್ಶಣ ಮುಂದುವರಿಸುವುದಾಗಿ ತೀರ್ಮಾನಿಸಿ ಮೈಸೂರಿನ ಜೆ.ಜೆ.ಎಸ್. ಪಾಲಿಟೆಕ್ನಿಕ್ ಫಾರ್ ಫಿಜಿಕಲಿ ಹ್ಯಾಂಡೀಕ್ಯಾಪ್ಡ್ ಸೇರಿದೆ. ಅಲ್ಲಿ ನನ್ನ ಕಂಪ್ಯೂಟರ್ ಡಿಪ್ಲೊಮಾವನ್ನು ಪೂರೈಸಿ ಮೆಡಿಕಲ್ ಟ್ರಾನ್ಸ್ಕ್ರಿಪ್ಶನಿಷ್ಟ್ಆಗಿ ಸ್ವಲ್ಪ ದಿನ ಕೆಲಸ ಮಾಡಿದೆ. ಈಗ ಅದೆಲ್ಲವನ್ನೂ ಬಿಟ್ಟು ಈಸ್ಪೀಕ್ ಎಂಬ ಟಿ.ಟಿ.ಎಸ್ ತಂತ್ರಾಂಶದಲ್ಲಿ ಕನ್ನಡ ಭಾಷೆಯನ್ನು ಸೇರಿಸುವಲ್ಲಿ ಕೆಲಸ ಮಾಡುತ್ತಿದ್ದೇನೆ.
ನನ್ನ ಪ್ರಾಥಮಿಕ ಶಿಕ್ಶಣದ ಸಮಯದಲ್ಲಿ ನನ್ನ ಮನೆಯಲ್ಲಿ ನನಗೆ ಕೆಲವು ಮಹಾತ್ಮರ ಜೀವನ ಚರಿತ್ರೆಗಳು ಮತ್ತು ರಾಮಾಯಣ, ಮಹಾಭಾರತದಂತಹ ಪುರಾಣಗಳನ್ನೂ ಮತ್ತು ಕೆಲವು ಪತ್ರಿಕೆಗಳಲ್ಲಿ ಬರುವ ಲೇಖನಗಳನ್ನೂ ಓದಿ ಹೇಳುತ್ತಿದ್ದರು. ಅಲ್ಲದೇ ಟೀವೀ ಮತ್ತು ರೇಡಿಯೋಗಳನ್ನು ಕೇಳುತ್ತಿದ್ದೆ. ಇವುಗಳಿಂದಾಗಿ ನನ್ನ ಸಾಮಾನ್ಯ ಜ್ಞಾನ ಮತ್ತು ವೈಚಾರಿಕತೆ ಬೆಳೆಯಿತು. ಈ ಮದ್ಯೆ ನಾನು ಕಂಪ್ಯೂಟರ್ ಕಲಿತೆ. ಇದು ಮಹಾ ಜ್ಞಾನಭಂಡಾರವನ್ನೇ ನನ್ನ ಮುಂದೆ ತೆರೆದಿಟ್ಟಿತು. ಆದರೆ ನಾನು ಕನ್ನಡದಲ್ಲಿರುವ ಪಠ್ಯವನ್ನು ಕಂಪ್ಯೂಟರಿನ ಸಹಾಯದಿಂದ ಓದಲಾಗುತ್ತಿರಲಿಲ್ಲ. ಏಕೆಂದರೆ ನಾನು ಅಂಧನಾಗಿರುವುದರಿಂದ ಕಂಪ್ಯೂಟರಿನ್ಅ ಪರದೆಯ ಮೇಲೆ ಮೂಡುವ ಅಕ್ಶರಗಳನ್ನು ಧ್ವನಿ ರೂಪಕ್ಕೆ ಬದಲಾಯಿಸುವ ವಿಶೇಶ ತಂತ್ರಾಂಶದ ನೆರವು ಬೇಕಾಗುತ್ತದೆ. ಆದರೆ ಈ ವರೆಗೆ ಅಂತಹಾ ತಂತ್ರಾಂಶವು ಇಂಗ್ಲೀಶ್ನಲ್ಲಿ ಮಾತ್ರ ಲಭ್ಯವಿತ್ತು. ಆದರೆ ಈಗ ಅದು ಕನ್ನಡಕ್ಕೂ ಲಭ್ಯವಿದೆ. ಇದನ್ನು ಕನ್ನಡಕ್ಕೆ ತರುವಲ್ಲಿ ನಾನು ಕೆಲಸ ಮಾಡಿದ್ದೇನೆ. ಆ ಬಗ್ಗೆ ಬೇರೆ ಯಾವಾಗಲಾದರೂ ಮಾತನಾಡೋಣ. ಇದರಿಂದಾಗಿ ಸಹಜವಾಗಿಯೇ ನಾನು ಎಲ್ಲವನ್ನು ಪ್ರಶ್ನೆ ಮಾಡತೊಡಗಿದೆ ಮತ್ತು ನನ್ನ ಮನಸ್ಸಿಗೆ ಸರಿ ಎನಿಸದ ವಸ್ತು ಮತ್ತು ವಿಚಾರಗಳನ್ನು ಠೀಕೆ ಮಾಡತೊಡಗಿದೆ. ಅದು ಈಗಲೂ ಹಾಗೆಯೇ ಮುಂದುವರಿದಿದೆ! ಬಹುಶಹಾ ಅಗತ್ಯಕಿಂತ ಸ್ವಲ್ಪ ಜಾಸ್ತಿ ಠೀಕಿಸಿಬಿಟ್ಟೆ ಎಂದೂ ಕೆಲವೊಮ್ಮೆ ನನ್ನ ಮನಸ್ಸಿಗೆ ಅನಿಸಿದ್ದುಂಟು. ಆದರೆ ಆಡಿದ ಮಾತನ್ನು ಹಿಂಪಡೆಯಲು ನಾನೇನು ರಾಜಕಾರಣಿಯೇ?!
ನನಗೆ ನನ್ನ ಶಾಲೆ ಮತ್ತು ಕಾಲೇಜಿನ ಅನುಭವಗಳನ್ನೂ ನಿಮ್ಮೊಂದಿಗೆ ಹಂಚಿಕೊಳ್ಳುವ ಆಸೆ, ಆದರೆ ಇವತ್ತಿಗೆ ಇಷ್ಟು ಸಾಕು. ಇಲ್ಲದ್ದಿದ್ದರೆ ಓದುತ್ತಿರುವ ನಿಮಗೆ ಮಾಹಿತಿಯ ಅಜೀರ್ಣ ಸಮಸ್ಯೆಯಾಗಬಹುದು! ಅಲ್ಲವೇ?
ಇಲ್ಲಿ ಹೇಳಿದ ಈಸ್ಪೀಕ್ನ ಬಗ್ಗೆ ಒಂದು ಆರ್ಟಿಕಲ್ ಈ ಬ್ಲಾಗ್ನಲ್ಲಿಯೇ ಬರೆದಿದ್ದೇನೆ ದಯವಿಟ್ಟು ಅದನ್ನು ನೋಡಿ.
In this article I focused on my education, but not in depth. I also have given information about Kannada TTS called eSpeak which was developed by mr. Jonathan duddington, A person from UK. He has included more than 70 languages in eSpeak. Kannada is also one amongst them. apart from that around 5-6 Indian languages are also available in that. For more information about eSpeak, please refer to an article regarding using Indian languages with NVDA and eSpeak.
Subscribe to:
Posts (Atom)